ಭಾನುವಾರ, ಜನವರಿ 30, 2011

ಮದ್ದಿನ ಮನೆ ಹಾಗೂ ಗ್ಯಾರಿಸನ್ ಆಸ್ಪತ್ರೆ!!! ಮರೆಯಾಗುತ್ತಿರುವ ನೆನಪುಗಳು !!!

ಶ್ರೀ ರಂಗಪಟ್ಟಣದ  ಸ್ಮಾರಕ ಪರ್ಯಟನೆ ಯಾತ್ರೆಯಲ್ಲಿ ಕಳೆದಬಾರಿ  ಡೆಲ್ಲಿ ಗೇಟ್ ಬಗ್ಗೆ ಮಾಹಿತಿ ನೀಡಿದ್ದೆ, ಬನ್ನಿ ಇನ್ನೊಂದು ವಿಸ್ಮಯ ಸ್ಮಾರಕ ಪರಿಚಯ ಮಾಡಿಕೊಳ್ಳೋಣ.ಶ್ರೀರಂಗಪಟ್ಟಣ  ದಲ್ಲಿ  ನಿಮಗೆ ಕೆಲವುಕಡೆ " ಪಿರಮಿಡ್ " ಆಕಾರದ    ಕೆಲವು ಕಟ್ಟಡಕಾಣಲು ಸಿಗುತ್ತವೆ , ಶ್ರೀ ರಂಗಪಟ್ಟಣ ಕ್ಕೂ ಈಜಿಪ್ಟ್ ಗೂ ಏನಾದರೂ ಸಂಭಂದವಿದೆಯಾ ಅಂತಾ ಅನುಮಾನ ಬರುತ್ತೆ . ಆದ್ರೆ ಕ್ಷಮಿಸಿ ಇವುಗಳನ್ನು ಈಜಿಪ್ಟ್ ನವರು ನಿರ್ಮಿಸಿದ್ದಲ್ಲಾ ,                                                                                                                                                              ಇದನ್ನು  ಶ್ರೀ ರಂಗಪಟ್ಟಣ ಕೋಟೆ ಸಂರಕ್ಷಣೆಗೆ ಅಗತ್ಯವಿರುವ ಮದ್ದು ಗುಂಡು ಸಂರಕ್ಷಿಸಲುಹಾಗೂ ಯುದ್ದದ ಸಮಯದಲ್ಲಿ    ಆಯಕಟ್ಟಿನ ಪ್ರದೇಶಗಳಲ್ಲಿ ಕ್ಷಿಪ್ರವಾಗಿ ಕೋಟೆಯ ಎಲ್ಲಾ ಭಾಗಕ್ಕೂ ಮದ್ದು ಗುಂಡುಗಳು ಸರಬರಾಜು ಆಗುವಂತೆ ವೈಜ್ಞಾನಿಕವಾಗಿ  ಯೋಚಿಸಿ ನಿರ್ಮಿಸಿದಂತ ಮದ್ದಿನ ಮನೆಗಳು.                                                                                                                                                                  ಒಳಗಡೆ ಕಾಲಿಟ್ಟರೆ  ನೆಲಮಾಳಿಗೆ ಸಿಗುತ್ತದೆ ಅಲ್ಲಿ ಒಂದು ವಿಶಾಲವಾದ ಪ್ರದೇಶದಲ್ಲಿ ಮದ್ದು ಗುಂಡುಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುತಿದ್ದುದು ಕಂಡು ಬರುತ್ತದೆ. ಈ ಮನೆಯ ಒಳ ಹೊಕ್ಕರೆ ಬೇಸಿಗೆಯಲ್ಲಿ ತಂಪಾಗಿಯೂ, ಚಳಿಗಾಲದಲ್ಲಿ  ಬೆಚ್ಚಗೆ , ಮಳೆಗಾಲದಲ್ಲಿ ಶೀತವಿಳಿಯದೆ  ಮದ್ದು ಗುಂಡುಗಳು ಪ್ರಕೃತಿ ವಿಕೋಪಕ್ಕೆ ಸಿಲುಕದಂತೆ  ಎಚ್ಚರಿಕೆಯಿಂದ ಈ ಮನೆಯ ನಿರ್ಮಾಣ ಮಾಡಿದ್ದಾರೆ.                                                                                                                                        ಬನ್ನಿ ಹತ್ತಿರದಲ್ಲೇ ಇರುವ ಮತ್ತೊಂದು ವಿಸ್ಮಯ ನೋಡೋಣ                                                                           ಚಿತ್ರದಲ್ಲಿ ಕಾಣುತ್ತಿರುವುದು  ಗ್ಯಾರಿಸನ್ ಆಸ್ಪತ್ರೆ  ಯುದ್ದದ ಸಮಯದಲ್ಲಿ ಗಾಯಗೊಂಡ   ಬ್ರಿಟೀಶ್ ಪರ ಅಧಿಕಾರಿಗಳಿಗೆ, ಸೈನಿಕರಿಗೆ ಇಲ್ಲಿ ಚಿಕಿತ್ಸೆ ನೀದಲಾಗುತ್ತಿತ್ತೆಂದು ಹೇಳುತ್ತಾರೆ.1799 ರಲ್ಲಿ ಇದನ್ನು ಲಾರ್ಡ್ ವೆಲ್ಲೆಸ್ಲಿ [ ಡ್ಯೂಕ್ ಆಫ್ ವೆಲ್ಲಿಂಗ್ಟನ್ ] ನಿರ್ಮಾಣ ಮಾಡಿದನೆಂದು ತಿಳಿದುಬರುತ್ತದೆ.ಹಾಗೂ ಈ ಆಸ್ಪತ್ರೆ ಸುಮಾರು ವರ್ಷ  ತನ್ನ  ಸೇವೆ  ಸಲ್ಲಿಸಿದ್ದಾಗಿ . ತಿಳಿದು ಬರುತ್ತದೆ. ಐತಿಹಾಸಿಕ  ಮಹತ್ವಉಳ್ಳ  ಇಂತಹ  ಸ್ಮಾರಕಗಳು  ಕಣ್ಮರೆಯಾಗುತ್ತಿರುವುದು ಇತಿಹಾಸದ ಅವನತಿಯೇ ಸರಿ.

3 ಕಾಮೆಂಟ್‌ಗಳು:

ಮನಸಿನಮನೆಯವನು ಹೇಳಿದರು...

ಇಂತಹ ವಿಷಯಗಳ ಬಗ್ಗೆ ಎಷ್ಟೇ ಕೂಗಿ ಹೇಳುತ್ತಿದ್ದರೂ ಸಂಬಂಧಪಟ್ಟವರು ಕೇಳಿಯೂ ಕೇಳದಂತೆ ಇರುತ್ತಾರೆ...
ಶ್ರೀರಂಗನೇ ಕಾಪಾಡಬೇಕು..

balasubramanya ಹೇಳಿದರು...

@ ವಿಚಲಿತ [ಗುರುಪ್ರಸಾದ್] ನಿಮ್ಮ ಮಾತು ನಿಜ . ಅನಿಸಿಕೆಗೆ ಥ್ಯಾಂಕ್ಸ್.

ಸೀತಾರಾಮ. ಕೆ. / SITARAM.K ಹೇಳಿದರು...

+೧ ವಿಚಲಿತರೊಡನೆ